ಭಾರತ, ಡಿಸೆಂಬರ್ 6 -- ಬೆಂಗಳೂರು: ವಿದ್ಯಾರ್ಥಿ ವೇತನ, ಸಾರಿಗೆ ವ್ಯವಸ್ಥೆ, ಫಲಿತಾಂಶ ವಿಳಂಬ, ಉಚಿತ ಬಸ್ ಪಾಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.17ರಂದು ರಾಜ್ಯ ಮಟ್ಟದ ಬಂದ್ ಗೆ ವಿದ್ಯಾರ್ಥಿಗಳು ಬಂದ್ ಮಾಡುತ್ತಿದ್ದು, ಈ ಹೋರಾಟಕ್ಕೆ ಎನ್ಎಸ್ ಯೂಐ ನೇತೃತ್ವ ವಹಿಸುತ್ತಿದೆ ಎಂದು ಎನ್ಎಸ್ ಯೂಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಅವರು ತಿಳಿಸಿದ್ದಾರೆ.

ಕ್ವಿನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನಾಡಿನ ಪ್ರಗತಿಗೆ ಮುಖ್ಯವಾದುದು ವಿದ್ಯಾರ್ಥಿಗಳು ಹಾಗೂ ಅವರಿಗೆ ಶಿಕ್ಷಣ ನೀಡುವುದಾಗಿದೆ. ಇಂದು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡದಂತೆ ಸರ್ಕಾರ ನೀತಿ ರೂಪಿಸುತ್ತಿವೆ. ಹಿಂದೆ ಎಲ್ಲ ಸರ್ಕಾರಗಳು ವಿದ್ಯಾರ್ಥಿಗಳು ಓದಬೇಕು ಎಂದು ವಿದ್ಯಾರ್ಥಿ ವೇತನ, ಬ್ಯಾಂಕ್ ಸಾಲ, ಸಾರಿಗೆ ವ್ಯವಸ್ಥೆ, ಬಸ್ ಪಾಸ್ ನೀಡುತ್ತಿದ್ದವು. ಆದರೆ ಇಂದು ವಿದ್ಯಾಭ್ಯಾಸ ಆಗದಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಹಿಂದೆ ಫಲಿತಾಂಶಗಳು ನಿಗದಿತ ಅವಧಿಗಿಂತ ಕೆಲ ದಿನ ಮ...