ಭಾರತ, ಡಿಸೆಂಬರ್ 6 -- Paadaraya Title Poster: ಚಕ್ರವರ್ತಿ ಚಂದ್ರಚೂಡ್ ಮತ್ತೆ ನಿರ್ದೇಶನದ ಟ್ರ್ಯಾಕ್‌ಗೆ ಮರಳಿದ್ದಾರೆ. ಹನುಮ ಜಯಂತಿಯಂದೇ ತಮ್ಮ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಟೈಟಲ್ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ 'ಪಾದರಾಯ' ಎಂದು ಟೈಟಲ್ ಇಡಲಾಗಿದ್ದು, ಈ ಚಿತ್ರವನ್ನು ಖ್ಯಾತ ನಿರ್ಮಾಪಕ ಹಾಗೂ ವಿತರಕ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರದಲ್ಲಿ 'ಮೈನಾ'. 'ಸಂಜು ವೆಡ್ಸ್ ಗೀತಾ' ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕ ನಟನಾಗಿ ನಟಿಸುತ್ತಿದ್ದಾರೆ.

ನೈಜ ಘಟನೆ ಆಧರಿತ ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರ ಏಕಕಾಲದಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ, ಮಲಯಾಳಂ ಐದು ಭಾಷೆಯಲ್ಲಿ ನಿರ್ಮಾಣವಾಗಿ ಬಿಡುಗಡೆಯಾಗುತ್ತಿದೆ. ನಾಗಶೇಖರ್ ನಾಯಕ ನಟನಾಗಿ ನಟಿಸುವುದರ ಜೊತೆಗೆ ಚಿತ್ರಕ್ಕೆ ಸಹ ನಿರ್ಮಾಪಕ ಕೂಡ ಆಗಿದ್ದಾರೆ. ವಿಶೇಷ ಎಂದರೆ ಈ ಚಿತ್ರದ ಶೀರ್ಷಿಕೆ ಪೋಸ್ಟರ್‌ ಅನ್ನು ನಟ ಕಿಚ್ಚ ಸುದೀಪ್‌ ಬಿಡುಗಡೆ ಮಾಡಿ ಶುಭ ಕೋರಿದ್ದಾರ...