ಭಾರತ, ಏಪ್ರಿಲ್ 4 -- Vinay Somaiah: ಸಾಮಾಜಿಕ ತಾಣದಲ್ಲಿ ತನ್ನ ತೇಜೋವಧೆ ಮಾಡಲಾಗುತ್ತಿದೆ ಎಂದು ಮನನೊಂದು ಮಡಿಕೇರಿ ಮೂಲದ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ (39) ಬೆಂಗಳೂರು ನಾಗವಾರದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೊಡಗಿನ ಸಮಸ್ಯೆಗಳು ಎಂಬ ವಾಟ್ಸಪ್ ಗ್ರೂಪ್‌ನಲ್ಲಿ ಜನವರಿ ತಿಂಗಳಲ್ಲಿ ಯಾರೋ ಶೇರ್ ಮಾಡಿದ್ದ ಪೋಸ್ಟ್‌ಗೆ ಸಂಬಂಧಿಸಿ ಕೇಸ್ ದಾಖಲಾಗಿತ್ತು. ಈ ಗ್ರೂಪ್‌ನ ಅಡ್ಮಿನ್ ಎಂಬ ಕಾರಣಕ್ಕೆ ವಿನಯ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಇಂದು (ಏಪ್ರಿಲ್ 5) ರಾಜಕೀಯ ಸಂಚಲನಕ್ಕೆ ಕಾರಣವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಕೆಸರರೆಚಾಟ ಶುರುಮಾಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ಪ್ರಮುಖ 10 ವಿದ್ಯಮಾನ ಇಲ್ಲಿದೆ

ಸೋಷಿಯಲ್ ಮೀಡಿಯಾ ಪೋಸ್ಟ್‌ಗೆ ಸಂಬಂಧಿಸಿ ತನ್ನ ತೇಜೋವಧೆ ಮಾಡಲಾಗುತ್ತಿದೆ. ತನ್ನ ವಿರುದ್ಧ ಪಿತೂರಿ ನಡೆಯುತ್ತಿದೆ ಎಂದು ಮನನೊಂದು ಬಿಜೆಪಿ ಕಾರ್ಯಕರ್ತ ಮಡಿಕೇರಿ ಮೂಲದ ವಿನಯ್ ಸೋಮಯ್ಯ ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ಆತ್...