ಭಾರತ, ಜೂನ್ 2 -- ಭಾರತ ಮತ್ತು ಪಾಕಿಸ್ತಾನದ ನಡುವೆ ಏಷ್ಯಾಕಪ್‌ ಹಾಗೂ ವಿಶ್ವಕಪ್‌ ಆತಿಥ್ಯ ಕುರಿತಾಗಿ ಭಿನ್ನಾಭಿಪ್ರಾಯಗಳಿವೆ. ಭಾರತವಂತೂ, ಏನೇ ಆದರೂ ಪಾಕಿಸ್ತಾನಕ್ಕೆ ಮಾತ್ರ ಪ್ರಯಾಣಿಸುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದೆ. ಅಲ್ಲದೆ ಏಷ್ಯಾಕಪ್‌ ಅನ್ನು ಪಾಕಿಸ್ತಾನದಿಂದ ಸಂಪೂರ್ಣವಾಗಿ ಹೊರಗಡೆ ಆಯೋಜಿಸಲು ತಿಳಿಸಿದೆ. ಇದರಿಂದ ಅಸಮಾಧಾನಗೊಂಡಿದ್ದ ಪಾಕಿಸ್ಥಾನ ಭಾರತದಲ್ಲಿ ಆಯೋಜನೆಯಾಗುತ್ತಿರುವ ಏಕದಿನ ವಿಶ್ವಕಪ್‌ನಿಂದ ಹೊರಗುಳಿಯುವುದಾಗಿಯೂ ಹೇಳಿತ್ತು. ಈ ನಡುವೆ ಈ ಕುರಿತು ಮತ್ತೊಂದು ಬೆಳವಣಿಗೆ ನಡೆದಿದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC)ಯ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಮತ್ತು ಸಿಇಒ ಜಿಯೋಫ್ ಅಲ್ಲಾರ್ಡಿಸ್ ಅವರು ಏಕದಿನ ವಿಶ್ವಕಪ್ ಕುರಿತಾಗಿ ಮಾತನಾಡಲು ಪಾಕಿಸ್ಥಾನಕ್ಕೆ ತೆರಳಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ಬಾಬರ್‌ ಅಜಮ್ ಪಡೆಯ ಭಾಗಿ ಕುರಿತಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB)ಯಿಂದ ಖಚಿತ ಮಾಹಿತಿ ಪಡೆಯಲು ಲಾಹೋರ್‌ಗೆ ಬಂದಿದ್ದಾರೆ. ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್...